Followers

Wednesday, September 9, 2009


ಛಲಬೇಕು ಶರಣಂಗೆ ಪರಧನವನೊಲ್ಲೆಂಬ!
ಛಲಬೇಕು ಶರಣಂಗೆ ಪರಸತಿಯನೊಲ್ಲೆಂಬ!
ಛಲಬೇಕು ಶರಣಂಗೆ ಪರದೈವವನೊಲ್ಲೆಂಬ
ಛಲಬೇಕು ಶರಣಂಗೆ ಲಿಂಗಜಂಗಮವೊಂದೆಂಬ!
ಛಲಬೇಕು ಶರಣಂಗೆ ಪ್ರಸಾದ ದಿಟವೆಂಬ!
ಛಲವಿಲ್ಲದವರ ಮೆಚ್ಚ ಕೂಡಲಸಂಗಮದೇವ.
ನುಡಿದರೆ ಮುತ್ತಿನ ಹಾರದಂತಿರಬೇಕು!
ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು!
ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು!
ನುಡಿದರೆ ಲಿಂಗ ಮೆಚ್ಚಿ ಅಹುದೆನಬೇಕು ?
ನುಡಿಯೊಳಗಾಗಿ ನಡೆಯದಿದ್ದರೆ
ಕೂಡಲಸಂಗಮದೇವನೆಂತೊಲಿವನಯ್ಯ ?
ಉಳ್ಳವರು ಶಿವಾಲಯವ ಮಾಡಿಹರು!
ನಾನೇನ ಮಾಡುವೆ ? ಬಡವನಯ್ಯ!
ಎನ್ನ ಕಾಲೇ ಕಂಬ, ದೇಹವೇ ದೇಗುಲ,
ಶಿರವೇ ಹೊನ್ನ ಕಳಶವಯ್ಯ!
ಕೂಡಲಸಂಗಮದೇವ ಕೇಳಯ್ಯ,
ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ!

No comments:

Post a Comment